ಸೋಮವಾರ, ಮಾರ್ಚ್ 12, 2018

ಕಾಳುಮೆಣಸಿಗೆ ಜೈವಿಕ ಗೊಬ್ಬರ


     

 ಕಾಳುಮೆಣಸಿಗೆ ಜೈವಿಕ ಗೊಬ್ಬರ ಏಕೆ ? ಹೇಗೆ ? 

              ಬರಹ : ಕೂಡಂಡ ರವಿ, ಹೊದ್ದೂರು.  


 

ಕೊಡಗು ಸೇರಿದಂತೆ ವಿವಿಧೆಡೆಗಳಲ್ಲಿ ಕಾಳು ಮೆಣಸನ್ನು ಹೆಚ್ಚಿನ ಪ್ರಮಾಣದಲ್ಲಿ ಮಿಶ್ರ ಬೆಳೆಯಾಗಿ ಬೆಳೆಯುವರು. ಇದನ್ನು ಕಡಿಮೆ ಖರ್ಚಿನಲ್ಲಿ  ಬೆಳೆದು  ಅಧಿಕ ಇಳುವರಿ ಪಡೆದ್ದಲ್ಲಿ  ಬೆಳೆಗಾರ ಬಮಧುಗಳಿಗೆ ವರದಾನವಾಗಲಿದೆ.  ಈ ನಿಟ್ಟಿನಲ್ಲಿ ಬೆಳೆಗಾರರಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಗೋಣಿಕೊಪ್ಪಲಿನ ಕೃಷಿ ವಿಜ್ಞಾನ ಕೇಂದ್ರವು ಹಲವಾರು ಯೋಜನೆಗಳನ್ನು ರೂಪಿಸಿದೆ. 

ಅದರಂತೆ  ಈ ಸಂಸ್ಥೆಯು ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹ ಎಂಬ ಜೈವಿಕ ಗೊಬ್ಬರವನ್ನು ಕಾಳು ಮೆಣಸು ಬೆಳೆಯಲ್ಲಿ  ಬಳಸಿ ಶೀಘ್ರ ಸೊರಗು ಮತ್ತು ಹಳದಿ ರೋಗವನ್ನು ಹತೋಟಿ ಮಾಡಲು ಶಿಫಾರಸ್ಸು ಮಾಡಿರುವರು. ಬೆಳೆಗಾರ ಬಂಧುಗಳು ಈ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಕಾಳುಮೆಣಸಿನಲ್ಲಿ ಬಳಸಿ ಇಳುವರಿ ಹೆಚ್ಚಿಸಬೇಕೆಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ತಜ್ಞ ಡಾ.ವೀರೇಂದ್ರ ಕುಮಾರ್ ಮನವಿ ಮಾಡಿದ್ದಾರೆ. 

        ಗೊಬ್ಬರದಿಂದ ರೋಗ ಹತೋಟಿ ! 

ಅರ್ಕಾ ಸೂಕ್ಷಾಣು  ಸಮೂಹವನ್ನು ಕಾಳುಮೆಣಸಿಗೆ ಬಳಸುವುದರಿಂದ ಬಳ್ಳಿಗಳು ಹೊಸದಾಗಿ ಚಿಗುರು ಬರಲು, ಶೀಘ್ರ ಸೋರಗು ರೋಗವನ್ನು ಹತೋಟಿ ಮಾಡಲು, ಕೊತ್ತು ಬೀಳುವ ಸಮಸ್ಯೆಯನ್ನು ಕಡಿಮೆಮಾಡಲು ಮತ್ತು ಉತ್ತಮವಾಗಿ ಬೇರು ಬರಲು ಸಹಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.  

ಜೈವಿಕ ಗೊಬ್ಬರಗಳು ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಗುಣ ವಿಶೇಷತೆಯಿಂದ ಪ್ರಾಮುಖ್ಯತೆಯನ್ನು ಪಡೆದಿರುತ್ತವೆೆ. ಪ್ರಸ್ತುತ ಜೈವಿಕ ಗೊಬ್ಬರಗಳ ಬಳಕೆ ಬಗ್ಗೆ ಸರಿಯಾದ ಮಾಹಿತಿಯಿಲ್ಲದಿರುವುದರಿಂದ, ಜೈವಿಕ ಸಂಪನ್ಮೂಲಗಳ ಮತ್ತು ತಂತ್ರಜ್ಞಾನದ ಕೊರತೆಯಿಂದಾಗಿ ಜೈವಿಕ ಗೊಬ್ಬರಗಳ ಬಳಕೆ ಕಡಿಮೆಯಾಗಿರುತ್ತದೆ. ಈ ಕೊರತೆಯನ್ನು ನೀಗಿಸಲು ಮತ್ತು ಒಂದೇ ರೀತಿಯ ಜೈವಿಕ ಗೊಬ್ಬರಗಳ ಬಳಕೆಯಿಂದ ಉಂಟಾಗುವ ಅಧಿಕ ಖಚರ್ು ಮತ್ತು ಕಡಿಮೆ ಕಾರ್ಯ ಕ್ಷಮತೆಯ ನ್ಯೂನತೆಯನ್ನು ಹೋಗಲಾಡಿಸಲು  ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ  ಸಂಸ್ಥೆ,  ಜೈವಿಕ ಗೊಬ್ಬರ ಅಕರ್ಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಉತ್ಕೃಷ್ಟ ತಂತ್ರಜ್ಞಾನದೊಂದಿಗೆ ಅಭಿವೃದ್ದಿಪಡಿಸಿದೆ ಎಂದು ಅವರು ತಿಳಿಸಿದ್ದಾರೆ.  

 


ಸೂಕ್ಷ್ಮಾಣು ಜೀವಿಗಳ ಸಮೂಹದ ಉಪಯೋಗಗಳು

* ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಹಾಗೂ ಸಸ್ಯ ಬೆಳವಣಿಗೆಯನ್ನು ಪ್ರಚೋದಿಸುವ (ಅಜಟೋಬ್ಯಾಕ್ಟರ್ ಟ್ರೋಪಿಕಾಲಸ್, ಬೆಸಿಲ್ಲಸ್ ಆರ್ಯಭಟ ಮತ್ತು ಸುಡೋಮೋನಾಸ್ ಥಾಯ್ವಾನೆನ್ಸಿಸ್) ಕಾರ್ಯಕ್ಷಮತೆಯನ್ನು ಹೊಂದಿರುತ್ತದೆ.

* ಈ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಬಳಸುವುದರಿಂದ ಕಾಳುಮೆಣಸಿನ ಗಿಡ ಹಳದಿಯಾಗುವುದನ್ನು ತಡೆಗಟ್ಟುತ್ತದೆ ಹಾಗೂ ಬೇರಿನ ಬೆಳವಣಿಗೆ ಉತ್ತಮವಾಗಿದ್ದು, ಶೀಘ್ರ ಸೊರಗು ರೋಗವನ್ನು ಹತೋಟಿಯಲ್ಲಿಡುತ್ತದೆ. 

* ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹದ ಬಳಕೆಯಿಂದ ಸಸ್ಯದ ಬೆಳವಣಿಗೆ,ರೋಗ ನಿಯಂತ್ರಣ ಮತ್ತು ಇಳುವರಿ ಅಧಿಕಗೊಳ್ಳುತ್ತದೆ. 

* ಜೈವಿಕ ಗೊಬ್ಬರವನ್ನು ಬೀಜೋಪಚಾರ, ಮಣ್ಣಿಗೆ, ಕೊಟ್ಟಿಗೆ ಗೊಬ್ಬರ ಮತ್ತು ಬೇವಿನ ಹಿಂಡಿಯ ಜೊತೆ ಮಿಶ್ರಣಮಾಡಿ ರೈತರು ಸುಲಭವಾಗಿ ಬಳಸಬಹುದು. 

* ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಹಾಗೂ ಸಸ್ಯ ಬೆಳವಣಿಗೆಯನ್ನು ಪ್ರಚೋದಿಸುವ ಸೂಕ್ಷ್ಮಾಣು ಜೀವಿಗಳನ್ನು ಬೇರೆ ಬೇರೆಯಾಗಿ ಹಾಕುವ ಅವಶ್ಯಕತೆಯಿಲ್ಲದೆ ರೈತರು ವಿವಿಧ ಬೆಳೆಗಳಿಗೆ ಬಳಸಬಹುದು.

ಬೀಜವು ಬೇಗ ಮೊಳೆಕೆಯೊಡೆಯುವಂತೆ ಮಾಡಿ ಸಸ್ಯದ ಬೆಳವಣಿಗೆ ಮತ್ತು ಧೃಡತೆಯನ್ನು ಹೆಚ್ಚಿಸುತ್ತದೆ.

 * ಶಿಫಾರಸ್ಸು ಮಾಡಿದ ಸಾರಜನಕ ಮತ್ತು ರಂಜಕಯುಕ್ತ ಗೊಬ್ಬರಗಳಲ್ಲಿ ಶೇ. 25 ರಷ್ಟು ಪ್ರಮಾಣವನ್ನು ಕಡಿಮೆ ಮಾಡುತ್ತದೆ.


ಬಳಸುವ ವಿಧಾನ 

ಕೊಟ್ಟಿಗೆ ಗೊಬ್ಬರ ಅಥವಾ ಕಹಿಬೇವಿನ ಹಿಂಡಿಗೆ ಸೇರಿಸುವ ವಿಧಾನ: 5 ಕೆ.ಜಿ ಅಕರ್ಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು 500 ಕೆ.ಜಿ ಕೊಟ್ಟಿಗೆ ಗೊಬ್ಬರ ಅಥವಾ 2 ಕೆ.ಜಿ ಅಕರ್ಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು 100 ಕೆ.ಜಿ ಕಹಿಬೇವಿನ ಹಿಂಡಿಯ ಜೊತೆ ಚೆನ್ನಾಗಿ ಮಿಶ್ರಣ ಮಾಡಿ ಕಾಳುಮೆಣಸು ಬೆಳೆಗಳಿಗೆ ಉಪಯೋಗಿಸಬೇಕು. 

ಬೆಳೆಗಳಿಗೆ ನೇರವಾಗಿ ಉಪಯೋಗಿಸುವ ವಿಧಾನ: 4 ಕೆ.ಜಿ ಅಕರ್ಾ ಸೂಕ್ಷ್ಮಾಣು ಜೀವಿಗಳ ಸಮೂಹ ಮತ್ತು ಒಂದು ಕೆ.ಜಿ ಬೆಲ್ಲವನ್ನು 200 ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಗಿಡದ ಬುಡ ಭಾಗಕ್ಕೆ ನೇರವಾಗಿ (4 ರಿಂದ 5 ಲೀಟರ್ನಷ್ಟು) ಮೇ-ಜೂನ್, ಆಗಸ್ಟ್ ಮತ್ತು ನವೆಂಬರ್ ತಿಂಗಳಿನಲ್ಲಿ ಸುರಿಯಬೇಕು ಎಂದು ಅವರು ಮಾಹಿತಿ ನೀಡಿರುವರು.  

     ಅರ್ಕಾ ಸೂಕ್ಷಾಣು ಜೀವಿಗಳ ಸಮೂಹವು ಗೋಣಿಕೊಪ್ಪಲುವಿನ  ಕೃಷಿ ವಿಜ್ಞಾನ ಕೇಂದ್ರ, ಲಭ್ಯವಿದೆ.   ಬೆಳೆಗಾರ ಬಂಧುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. 


ಕಾರ್ಯಕ್ರಮ ಸಂಯೋಜಕರು, ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ದೂರವಾಣಿ ಸಂಖ್ಯೆ: 08274-247274, ಇವರಿಂದ ಅಧಿಕ ಮಾಹಿತಿಯನ್ನು ಪಡೆಯಬಹುದಾಗಿದೆ. 


  


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ